ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬ ಸಂಭ್ರಮ: ಬೆಸ್ತರಪೇಟೆಯಲ್ಲಿ ಕಣ್ಮನ ಸೆಳೆಯುತ್ತಿರುವ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ರೂಪದ ಗಣೇಶ ಮೂರ್ತಿ

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ವಿಜೃಂಭಣೆ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ವಿವಿಧ ರೂಪ, ಭಂಗಿಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಎಲ್ಲೆಡೆ ಗಣಪತಿಯ ಆರಾಧನೆ ಶ್ರದ್ಧೆ, ಭಕ್ತಿಯಿಂದ ನಡೆಯುತ್ತಿದೆ.

ದೊಡ್ಡಬಳ್ಳಾಪುರ ನಗರದ ಬೆಸ್ತರಪೇಟೆಯಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡ ಸ್ವಾಮಿ ವಿವೇಕಾನಂದ ಘಟಕದ ವತಿಯಿಂದ 12‌ಅಡಿ ಎತ್ತರದ ಹಿಂದೂ‌ ಮಹಾಗಣಪತಿ(ಇಮ್ಮಡಿ ಪುಲಿಕೇಶಿ) ಮೂರ್ತಿಯನ್ನು ಪ್ರತಿಷ್ಟಾಪಿಸಿ ಪೂಜೆ ಪುನಸ್ಕಾರ ನೆರವೇರಿಸಲಾಗುತ್ತಿದೆ…

ಚಾಲುಕ್ಯ ವಂಶದ ಪ್ರಸಿದ್ಧ ರಾಜ ಇಮ್ಮಡಿ ಪುಲಿಕೇಶಿ ಲುಕ್‌ನಲ್ಲಿ ಗಣೇಶ ವಿಗ್ರಹ ಎಲ್ಲರ ಕಣ್ಮನ ಸೆಳೆಯುತ್ತಿದೆ.

ಪ್ರತಿ ವರ್ಷವೂ ಪುರಾತನ ಕಾಲದಿಂದಲೂ ನಾಡಿನ ಅಭಿವೃದ್ಧಿಗಾಗಿ, ಏಳಿಗೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ದುಡಿದ ಮಹಾನ್ ಸಾಧಕರ ಕುರಿತು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶದಿಂದ ಅವರನ್ನು ಹೋಲುವ (ಶೈಲಿ) ಗಣೇಶ ಮೂರ್ತಿಗಳನ್ನು ತಯಾರಿಸಿ ಗಣೇಶ ಹಬ್ಬದಂದು ಪ್ರತಿಷ್ಟಾಪಿಸಿ‌ ಪೂಜಿಸಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ವ ಬಜರಂಗದಳ ನಗರ ಕಾರ್ಯದರ್ಶಿ ಉಮೇಶ್ ತಿಳಿಸಿದರು.

ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಇತಿಹಾಸ…

ಇಮ್ಮಡಿ ಪುಲಿಕೇಶಿಯು (ಕ್ರಿ.ಶ. 610-642) ಚಾಲುಕ್ಯ ವಂಶದ ಪ್ರಸಿದ್ಧ ದೊರೆ. ಅವನು ದಖನ್ ಪ್ರಸ್ಥಭೂಮಿಯಲ್ಲಿ ಬೃಹತ್ ಸಾಮ್ರಾಜ್ಯವನ್ನು ಸ್ಥಾಪಿಸಿದನು ಮತ್ತು ಹರ್ಷವರ್ಧನನನ್ನು ಸೋಲಿಸಿ ದಕ್ಷಿಣಾಪಥೇಶ್ವರ ಎಂಬ ಬಿರುದನ್ನು ಪಡೆದನು. ಅವನ ಆಡಳಿತದಲ್ಲಿ ಚಾಲುಕ್ಯ ಸಾಮ್ರಾಜ್ಯವು ಉಚ್ಛ್ರಾಯ ಸ್ಥಿತಿಯನ್ನು ತಲುಪಿತು.

ಚಿಕ್ಕಂದಿನಿಂದಲೂ ಹೋರಾಟದ ಜೀವನ ನಡೆಸಿದ ಪುಲಿಕೇಶಿ ತನ್ನ ರಾಜ್ಯವನ್ನು ವಿಸ್ತರಿಸಿದ. ಉತ್ತರ ಭಾರತವನ್ನು ವಶಪಡಿಸಿಕೊಳ್ಳು ಇಂಗಿತ ಇತ್ತು. ಆದರೆ ಹರ್ಷವರ್ಧನನೇ ಯುದ್ಧ ಸಾರಿದಾಗ ಪುಲಿಕೇಶಿ ಎದುರು ಸೋತು ಸಂಧಿ ಮಾಡಿಕೊಂಡಿದ್ದ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago