ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು ಎಂದರು.
ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ ಎಂದು ಹೇಳಿದರು.
ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ ಎಂದು ತಿಳಿಸಿದರು.
ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…