ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು ಎಂದರು.
ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ ಎಂದು ಹೇಳಿದರು.
ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ ಎಂದು ತಿಳಿಸಿದರು.
ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…