ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು ಎಂದರು.
ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ ಎಂದು ಹೇಳಿದರು.
ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ ಎಂದು ತಿಳಿಸಿದರು.
ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…