ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು ಎಂದರು.
ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ ಎಂದು ಹೇಳಿದರು.
ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ ಎಂದು ತಿಳಿಸಿದರು.
ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…