ಭಾರತ ಬಲಿಷ್ಠವಾಗಿ ಬೆಳೆಯಬೇಕಾದರೆ ಮೊದಲು ಬಡವರಿಗೆ ಹೊಟ್ಟೆ ತುಂಬಾ ಅನ್ನ ಮತ್ತು ಸ್ವತಂತ್ರ ಚಿಂತನೆಗೆ ಅವಕಾಶ ನೀಡುವ ಶಿಕ್ಷಣ ಸಿಗಬೇಕು, ಪುರೋಹಿತಷಾಹಿ ಯಜಮಾನಿಕೆ ಮತ್ತು ಸಾಮಾಜಿಕ ಶೋಷಣೆ ಕೊನೆಗೊಳ್ಳಬೇಕು ಎಂದು ದಿಟ್ಟತನದಿಂದ ಹೇಳಿದವರು ಸ್ವಾಮಿ ವಿವೇಕಾನಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾರತದಲ್ಲಿ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಚಿಂತನೆಗಳ ಮಿಲನವಾಗಬೇಕು, ವೇದಾಂತದ ಮೆದುಳು ಮತ್ತು ಇಸ್ಲಾಮಿನ ದೇಹ – ಇದು ನಮ್ಮ ಮುನ್ನಡೆಗೆ ದಾರಿ ತೋರಬೇಕು ಎಂಬ ದಾರ್ಶನಿಕ ನುಡಿಗಳನ್ನಾಡಿದವರು ಸ್ವಾಮಿ ವಿವೇಕಾನಂದರು ಎಂದರು.
ರಾಜಕಾರಣಿ ಮತ್ತು ಆಡಳಿತಗಾರನಾಗಿ ನಾನು ಕೈಗೊಳ್ಳುತ್ತಾ ಬಂದ ನೀತಿ-ನಿರ್ಧಾರಗಳಲ್ಲಿ ಹಿಂದೂ ಧರ್ಮದ ಸುಧಾರಕ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರೇರಣೆ ಇದೆ ಎನ್ನುವುದನ್ನು ವಿನೀತನಾಗಿ ಅರಿಕೆ ಮಾಡಿಕೊಳ್ಳುವೆ ಎಂದು ಹೇಳಿದರು.
ತಮ್ಮ ಅಲ್ಪಾಯುಷ್ಯದ ಅವಧಿಯ ಪ್ರತಿಯೊಂದು ಗಳಿಗೆಯನ್ನು ಹಿಂದೂ ಧರ್ಮದ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ ದಾರ್ಶನಿಕ ಸ್ವಾಮಿ ವಿವೇಕಾನಂದರ ಹುಟ್ಟುಹಬ್ಬದ ದಿನ ಅವರನ್ನು ಗೌರವ ಮತ್ತು ಕೃತಜ್ಞತಾ ಭಾವದಿಂದ ನೆನೆಯುವೆ ಎಂದು ತಿಳಿಸಿದರು.
ನಾಡಿನ ಜನರೆಲ್ಲರು ವಿವೇಕಾನಂದರ ಚಿಂತನೆಗಳನ್ನು ಅರಿತುಕೊಂಡು ವಿವೇಕವನ್ನು ಬೆಳೆಸಿಕೊಳ್ಳಲಿ ಎಂದು ಹಾರೈಸಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…