ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷಗಳಿಗೆ ಕರೆ ಕೊಟ್ಟಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿ ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ ಎಂದರು.
ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ ಎಂದು ತಿಳಿಸಿದರು.
ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ.
ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ.
ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು ಎಂದು ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…