ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಗೆ ಟಿಕೆಟ್ ಆಕಾಂಕ್ಷಿಗಳಿಂದ ಹಣಾಹಣಿ ಶುರುವಾಗಿದೆ, ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ ಎಂದು ಹಾಲಿ ಸಂಸದ ಜಿ.ಎಸ್.ಬಸವರಾಜು ಅವರು ಮುಖಂಡರ ಸಭೆಯಲ್ಲಿ ತೇಲಿ ಬಿಟ್ಟಿದ್ದರು.
ಇದೀಗ ಮಾಜಿ ಸಂಸದ ಮುದ್ದಹನುಮೇಗೌಡರ ಸರದಿ ಬಂದಿದೆ. ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಸಂಸದ ಸ್ಥಾನದ ಟಿಕೆಟ್ ಗಾಗಿ ಫೈಟ್ ಆರಂಭಾವಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಅವರು ತುಮಕೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ನಾನು ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ. ಪಕ್ಷ ನನಗೆ ಟಿಕೆಟ್ ಕೊಡುವ ಭರವಸೆಯಿದೆ. ಟಿಕೆಟ್ ಗಾಗಿ ನಾನು ತಂತ್ರ ಮಾಡಲ್ಲ, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ನಾನು ಕೂಡ ತುಮಕೂರು ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ನಾನು ಸ್ಪರ್ಧೆ ಮಾಡುವುದು ಖಚಿತವಾಗಿದೆ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…