ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.
ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.
ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.
ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದು ಹೇಳಿದರು.
ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.
ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದು ಹೇಳಿದರು.
ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…