ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.
ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ  ಅವರು ಮಾತನಾಡಿದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದು ಹೇಳಿದರು.

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದು ಹೇಳಿದರು.

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

3 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

4 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

15 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

15 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

15 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

24 hours ago