ನಾನು ಯಾರಿಂದ ಯಾವತ್ತೂ ಭಿಕ್ಷೆ ಪಡೆದಿಲ್ಲ- ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ತಿರುಗೇಟು

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಶಾಸಕರಾಗುವ ಮುಂಚಿನಿಂದಲೂ ನಾನು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಬಮೂಲ್ ನಿರ್ದೇಶಕರಾಗಿ ಸೇರಿದಂತೆ ನಾನು ಅನುಭವಿಸಿರುವ ಆಕಾರ ಹಾಗೂ ಹುದ್ದೆಗಳು ರಾಜಕೀಯವಾಗಿ ನನ್ನ ಪ್ರಾಮಾಣಿಕತೆ, ಶ್ರಮದಿಂದ ಗಳಿಸಿರುವುದೇ ಹೊರತು ಯಾರ ಭಿಕ್ಷೆಯಿಂದ ಬಂದಿದ್ದಲ್ಲ. ಯಾವುದೇ ಭ್ರಷ್ಟಾಚಾರ ಮಾಡದೇ ಪ್ರಾಮಾಣಿಕತೆಯಿಂದ ನಡೆದುಕೊಂಡಿದ್ದೇನೆ ಎಂದು ಮಾಜಿ ಶಾಸಕರು ಧರ್ಮಸ್ಥಳಕ್ಕೆ ಬಂದು ನಿರೂಪಿಸಲಿ, ನಾನೂ ಬರಲು ಸಿದ್ಧನಿದ್ದೇನೆ ಎಂದು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ತಿರುಗೇಟು ನೀಡಿದ್ದಾರೆ.

ನಗರದ ಬಮೂಲ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಮೂಲ್ ಚುನಾವಣೆ, ಕೆಎಂಎಫ್ ನಿರ್ದೇಶಕ ಸ್ಥಾನ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ನಿಲ್ಲಲು ನಾನು ಹಾಕಿದ ಭಿಕ್ಷೆ ಎನ್ನುವ ಮಾಜಿ ಶಾಸಕರ ಮಾತಿನಲ್ಲಿ ಸತ್ಯವಿಲ್ಲ. ಅವರು 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದರು. ಆದರೆ ನಾನು  1995ರಿಂದಲೇ ಕಾಂಗ್ರೆಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ. ಮಾಜಿ ಶಾಸಕ ಗಂಟಿಗಾನಹಳ್ಳಿ ಕೃಷ್ಣಪ್ಪ ಅವರ ಪರವಾಗಿ ಕೆಲಸ ಮಾಡಿದ್ದೆ. 1997ರಲ್ಲಿ ಮಜರಾಹೊಸಹಳ್ಳಿ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಬರಲು ಶ್ರಮಿಸಿದ್ದೆ. ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜೀವ್ ಗ್ರಾಂ ಶಕ್ತಿ ಕೇಂದ್ರದ ಪ್ರತಿನಿಯಾಗಿ ಕೆಲಸ ಮಾಡಿದ್ದೆ. ಮಾಜಿ ಶಾಸಕರು ರಾಜಕೀಯವಾಗಿ ಸಕ್ರಿಯವಾಗುವ ಮುಂಚೆಯೇ ಗ್ರಾ.ಪಂ ಸದಸ್ಯನಾಗಿ, ಉಪಾಧ್ಯಕ್ಷನಾಗಿ ನಂತರ ಅಧ್ಯಕ್ಷನಾಗಿದ್ದೆ. ನಂತರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸಹ ಸ್ಪರ್ಧಿಸಿ, ಕಡಿಮೆ ಅಂತರದಿಂದ ಸೋತಿದ್ದೆ. ನನಗೆ ಪಕ್ಷ ನೀಡಿದ್ದಕ್ಕಿಂತ ಹೆಚ್ಚಾಗಿ ಅದರ ಎರಡರಷ್ಟು ನಾನು ಪಕ್ಷಕ್ಕಾಗಿ ದುಡಿದಿದ್ದೇನೆ. ಮಾಜಿ ಶಾಸಕರಾದ ಜೆ.ನರಸಿಂಹಸ್ವಾಮಿ, ಆರ್.ಜಿ.ವೆಂಕಟಾಚಲಯ್ಯ ಅವರ ಗೆಲುವಿಗೆ ಶ್ರಮಿಸಿದ್ದೇನೆ. ಆದರೆ ಯಾವುದೇ ಆಸೆ ಆಮಿಷಕ್ಕೆ ಬಲಿಯಾಗಿಲ್ಲ. ಅದನ್ನು ನೀವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ಜೆ.ನರಸಿಂಹಸ್ವಾಮಿ ಅವರಿಗೆ ನಾನು ಬೆಂಬಲಿಸಿದಾಗ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಿತ್ತು. ಈಗಿನ ಶಾಸಕ‌ ಧೀರಜ್ ಮುನಿರಾಜು ಸಹ ಉತ್ತಮ ವ್ಯಕ್ತಿ ಎಂದು ನಂಬಿ ಬೆಂಬಲಿಸಿದ್ದೇನೆ. ಭ್ರಷ್ಟರಾದರೆ ಅವರು ಯಾರೇ ಆಗಲೀ ಅವರನ್ನು ನಾನು ಬೆಂಬಲಿಸುವುದಿಲ್ಲ. ಬಮೂಲ್ ಚುನಾವಣೆಗೆ ನನ್ನ ಯೋಗ್ಯತೆ ನೋಡಿ ಸ್ಪರ್ಧಿಸಲು ಅವಕಾಶ ನೀಡಿದ್ದರು. ನನಗೆ ನೀವು ಭಿಕ್ಷೆ ಕೊಡುವಷ್ಟು ಯೋಗ್ಯರಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ಮಾಜಿ ಶಾಸಕರ ಸಹೋದರನನ್ನು ಏಕೆ ನಿಲ್ಲಿಸಲಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಟಿಕೆಟ್ ನಾನು ಕೇಳಿರಲಿಲ್ಲ : 

ಕಾಂಗ್ರೆಸ್ ಕಟ್ಟಾಳುವಾಗಿ ಅಡಿಪಾಯ ಹಾಕಿದ್ದೇನೆ. ಡಿಕೆಶಿ ಪಟ್ಟಾ ಶಿಷ್ಯ ನಾನು. ನಾನೇನಾದರೂ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿ ಅಂತಾ ನಿಮಗೆ ಅರ್ಜಿ ಹಾಕಿದ್ನಾ…ನನಗೆ ಜಿ.ಪಂ ನಿಂತ್ಕೋ ಅಂತಾ ಬಲವಂತ ಮಾಡಿದವರು ನೀವು, ಬೇಳಾಡಿದ್ದು ನೀವು. ಅಂದು ಸಿ.ನಾರಾಯಣಸ್ವಾಮಿ, ಡಾ.ವಿಜಯಕುಕುಮಾರ್ ರವರನ್ನು ಎದುರಿಸುವ ಶಕ್ತಿ ಅವರಲ್ಲಿ ಇರಲಿಲ್ಲ. ನಾನು ಯಾವತ್ತೂ ನಿಮ್ಮ ಬಳಿ ಭಿಕ್ಷೆ ಬೇಡಿಲ್ಲ ನನಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕೊಟ್ಟಿದ್ದರೆ ಅದು ಭಿಕ್ಷೆ ಅಂದುಕೊಳ್ಳುತ್ತಿದ್ದೆ ಎಂದರು.

ನನಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ನಾನು ರಾಜಕಾರಣದಲ್ಲಿ ಯಾರೀಗೂ ಮೋಸ ಮಾಡಿಲ್ಲ. ನಾನು ಯಾವತ್ತೂ ನಿಮ್ಮ ಬಳಿ ಭಿಕ್ಷೆ ಬೇಡಿಲ್ಲ. ನಿಮ್ಮ ತಮ್ಮನಿಂದ ಭಿಕ್ಷೆ ಪಡೆಯುವ ಕೀಳು ಮಟ್ಟಕ್ಕೆ ಇಳಿದಿಲ್ಲ. ನನಗೆ ನೀವು ಭಿಕ್ಷೆ ಕೊಡುವಷ್ಟು ಯೋಗ್ಯರಲ್ಲ ಎಂದರು.

ಕೆಎಂಎಫ್ ಕೇಳಿಲ್ಲ

ನಾನು ಕೆಎಂಎಫ್ ನಿರ್ದೇಶಕರಾಗಲು ಸಹ ಭಿಕ್ಷೆ ಕೊಟ್ಟಿದ್ದು  ಎಂದು ಹೇಳಿದ್ದೀರಿ. ಅದು ಸುಳ್ಳು, ನನಗೆ ನಿರ್ದೇಶಕರಾಗುವ ಉದ್ದೇಶವೇ ಇರಲಿಲ್ಲ. ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕೆಎಂಎಫ್ ನಿರ್ದೇಶಕರಾಗಿಸಿದರು. ಇದು ಅವರ ಹಾಕಿದ ಭಿಕ್ಷೆ ಎನ್ನುಬಹುದು.

ಕಮಿಟ್ಮೆಂಟ್ ರಾಜಕಾರಣ ಮಾಡಲ್ಲ‌ ನಾನು ರಾಜಕಾರಣದಲ್ಲಿ ಬಡವರ ಹಾಗೂ ಅಧಿಕಾರಿಗಳ ಹೊಟ್ಟೆ ಬಗೆದು ಹಣ ಸಂಪಾದನೆ ಮಾಡಿಲ್ಲ ಎಂದರು.

 ಡಿಕೆಶಿಗೆ ಹಾರ ಹಾಕಿದ್ದು ತಾಲೂಕಿಗೋಸ್ಕರ:

ಕೆಪಿಸಿಸಿ ವಕ್ತಾರರು ಆರೋಪಿಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲು ರಾತ್ರೋರಾತ್ರಿ ಹೋಗಿಲ್ಲ. ತಾಲೂಕಿನಲ್ಲಿ ಬಮೂಲ್‍ನಲ್ಲಿ  ಕೆಲಸಗಳಾಗಬೇಕು. ಈ ಹಿಂದೆ ಬಮೂಲ್ ಉತ್ಪನ್ನಗಳ ಘಟಕಕ್ಕೆ ಡಿ.ಕೆ.ಶಿವಕುಮಾರ್ ಜಮೀನು ಮಂಜೂರು ಮಾಡಿಸಿದ್ದಾರೆ. ಅವರಿಂದ ನಮ್ಮ ತಾಲೂಕಿಗೆ ಕೆಲಸಗಳಾಗಬೇಕಿದೆ. ಅವರ ಮೇಲಿನ ಅಭಿಮಾನದಿಂದ ಹಾರ ಹಾಕಿ ಬಂದೆ ಎಂದರು.

ಕಾಂಗ್ರೆಸ್ ಶಕ್ತಿಹೀನ:

ನಿಮ್ಮ ಬಗ್ಗೆ ಅಧಿಕಾರಿಗಳಲ್ಲಿ ಒಳ್ಳೆ ಅಭಿಪ್ರಾಯ ಇಲ್ಲ. ಅಪ್ಪನ ಬಗ್ಗೆ ಮಾತನಾಡಿರುವುದು ಆಕಸ್ಮಿಕವಾಗಿ ಬಂದಿರುವುದು. ಆದರೆ ನನ್ನ ಮೇಲೆ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲು ಹೊರಟಿದ್ದರು. ಅದಕ್ಕಾಗಿ ನಾನು ಅಡಾಸ್ ಪದ ಬಳಸಬೇಕಾಯಿತು.  ತಾಲೂಕಿನಲ್ಲಿ ಒಬ್ಬ ಕಾಂಗ್ರೆಸ್ ಕಾರ್ಯಕರ್ತನೂ ನಿಮ್ಮಿಂದ ಉದ್ದಾರ ಆಗಿಲ್ಲ.  ಪಕ್ಷ ಬಿಟ್ಟು ಹೊರಬಂದು ನಿಮ್ಮ ಶಕ್ತಿ ಪ್ರದರ್ಶಿಸಿ, ಇವರು ಪಕ್ಷ ಬಿಟ್ಟರೆ ಕಾಂಗ್ರೆಸ್ ಫೀನಿಕ್ಸ್‍ನಂತೆ ಮೇಲೇಳುತ್ತದೆ. ಕೊವಿಡ್ ಸಮಯದಲ್ಲಿ ಯಾರು ಜನರಿಗೆ ಸಹಾಯ ಮಾಡಿದ್ದರೋ ಅವರನ್ನು ಜನ ಬೆಂಬಲಿಸಿದ್ದಾರೆ. ಯಾರಿಗೂ ಸಹಾಯ ಮಾಡದವರನ್ನು ದೂರ ನಿಲ್ಲಿಸಿದ್ದಾರೆ. ಶಾಸಕರಾಗಿದ್ದಾಗ ಅಧಿಕಾರಿಗಳಿಂದ ಹಣ ಪಡೆದಿಲ್ಲ ಎಂದು ನಿರೂಪಿಸಿ, ನಾನು ಏನು ಜನರಿಗೆ ಸಹಾಯ ಮಾಡಿದ್ದೇನೆ ನೀವು ಏನು ಮಾಡಿದ್ದೀರಿ, ಎನ್ನುವುದು ಸಾಬೀತು ಮಾಡಲು ಧರ್ಮಸ್ಥಳಕ್ಕೆ ಬನ್ನಿ ಪ್ರಮಾಣ ಮಾಡೋಣ ಎಂದು ಸವಾಲು ಹಾಕಿದರು.

ಒಬ್ಬ ಕಾಂಗ್ರೆಸ್ ಕಾರ್ಯಕರ್ತ, ನಿಮ್ಮಿಂದ ಉದ್ಧಾರ ಆಗಿಲ್ಲ. ಯಾರಾದರೂ ನಿಮ್ಮಿಂದ ಬದುಕು ಕಟ್ಟಿಕೊಂಡಿದ್ದಾರಾ… ನಿಮ್ಮ ಬಗ್ಗೆ ಅಧಿಕಾರಿಗಳಲ್ಲಿ ಒಳ್ಳೆ ಅಭಿಪ್ರಾಯ ಇದಿಯಾ.. ನೀವು ಕೊಟ್ಟಿರೋ ಕಾಟಕ್ಕೆ ಎಲ್ಲಾ ಅಧಿಕಾರಿಗಳು ರಕ್ತ ಕಣ್ಣೀರು ಸುರಿಸಿದ್ದಾರೆ.

ಭಿಕ್ಷೆ ತಗೋಂಡವರು ನೀವು. ಆರ್‌.ಜಿ.ವೆಂಕಟಾಚಲಯ್ಯ, ವೀರಪ್ಪ‌ಮೊಯ್ಲಿ, ಎಂಜಿ ಶ್ರೀನಿವಾಸ್, ರಂಗರಾಜಣ್ಣನವರು ನಿಮಗೆ ಭಿಕ್ಷೆ ಕೊಟ್ಟಿದ್ದು, ನೀವು ಪಕ್ಷ ಬಿಟ್ಟು ಹೊರ‌ಬಂದು ಮಾತಾಡಿ, ನಿಮ್ಮ ಶಕ್ತಿಯನ್ನು ಪ್ರದರ್ಶಿಸಿ. ಕಾಂಗ್ರೆಸ್ ನಲ್ಲಿ ಡ್ರೈವರ್ ಸರಿ ಇಲ್ಲ. ಕೋವಿಡ್ ನಲ್ಲಿ ಜನಕ್ಕೆ ಅನ್ಯಾಯ ಮಾಡಿದವರೆಲ್ಲರೂ ಸೋತಿದ್ದಾರೆ.. ನಾನು ಸೋಲೋದು ಜನರಿಗೆ ಅನ್ಯಾಯ ಮಾಡಿದಾಗ ನಿಮ್ಮಿಂದಲ್ಲ ಎಂದರು.

ಸುದ್ಧಿಗೋಷ್ಟಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ನಾಗರಿಕ ಹಿತರಕ್ಷಣಾ ಸಮಿತಿಯ ರವೀಂದ್ರ ಕುಮಾರ್ ಮತ್ತಿತರರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

12 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

16 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

23 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

24 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago