ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ 23/2, 23/3, 23/4, 23/8 ರಲ್ಲಿ ಸುಮಾರು 20 ಎಕರೆ ಜಮೀನು ನನ್ನ ಮತ್ತು ನನ್ನ ಧರ್ಮಪತ್ನಿರವರು ಕ್ರಯಕ್ಕೆ ಪಡೆದು ಖಾತೆಯಾಗಿರುತ್ತದೆ. 20 ಎಕರೆ ಜಮೀನನ್ನು ಕಾನೂನಾತ್ಮಕವಾಗಿ  ಖರೀದಿ ಮಾಡಿದ್ದೇನೆ. ಈ ಹಿನ್ನೆಲೆ ಮಾ.29ರ ಭಾನುವಾರದಂದು ಜಮೀನಿಗೆ ಕಾಂಪೌಂಡ್ ನಿರ್ಮಿಸುವ ವೇಳೆ ದಡಘಟ್ಟಮಡಗು ಗ್ರಾಮದ ಒಂದು ಕುಟುಂಬದ 19 ಮಂದಿ, ಜೊತೆಗೆ ಅವರ ಹತ್ತಿರ ಸಂಬಂಧಿಗಳು ಸಹ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಹಲ್ಲೆ ದುರುದ್ದೇಶದ್ದಾಗಿರುತ್ತದೆ. ನಾನು ಅವರ ಜಮೀನನ್ನು ಕಬಳಿಕೆ ಮಾಡಿಲ್ಲ. ನಾನು ಕಾಂಪೌಂಡ್ ಹಾಕುತ್ತಿರುವ ಜಮೀನಿಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ ನಮ್ಮ ಮೇಲೆ ದೌರ್ಜನ್ಯವೆಸಗಿ ಹಲ್ಲೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ವಕೀಲ ಪ್ರತಾಪ್ ಆರೋಪಿಸಿದರು.

ಈ ಕುರಿತು ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಮೋಸ, ವಂಚನೆ, ಕಾನೂನು ಉಲ್ಲಂಘನೆ ಮಾಡಿ ಯಾವ ಭೂಮಿಯನ್ನು ಖರೀದಿ ಮಾಡಿಲ್ಲ.‌ ಅದೇರೀತಿ ನೇರವಾಗಿ ನಾನು ಯಾವತ್ತೂ, ಯಾವ ರೈತನಿಂದಲೂ ಜಮೀನು ಖರೀದಿ‌ ಮಾಡಿಲ್ಲ. ರೈತರು ಬೇರೆಯವರಿಗೆ ಮಾರಾಟ ಮಾಡಿರುವ ವ್ಯಕ್ತಿಗಳಿಂದ ಕೊಳ್ಳುತ್ತೇನೆ ಎಂದರು..

ನಾನು ಕಷ್ಟಪಟ್ಟು ದುಡಿದ ಹಣದಲ್ಲಿ ಸಮಾಜ ಸೇವೆ ಮಾಡುತ್ತಿದ್ದೇನೆ. ರಾಜಕೀಯವಾಗಿ ಸಕ್ರಿಯನಾಗಿದ್ದೇನೆ‌. ಈ ನನ್ನ ಏಳಿಗೆ ಸಹಿಸದೇ ದುರುದ್ದೇಶದಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರಲು ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದರು…

ಅವರು ಜಮೀನು ವಿವಾದದಲ್ಲಿ ಕೋರ್ಟ್ ನಲ್ಲಿ ಕೇಸ್ ಹಾಕಿದ್ದರು. ಎಲ್ಲಾ ಕೇಸ್ ಡಿಸ್ ಮಿಸ್ ಆಗಿದೆ. ಯಾವುದೇ ಸ್ಟೇ ಇಲ್ಲ, ಯಾವುದೇ ಕೇಸ್ ಇಲ್ಲದೇ ಇದ್ದರೂ, ಇದು ನನ್ನ ಜಮೀನು ಎಂದು ಸುಖಾಸುಮ್ಮನೆ ಗಲಾಟೆ ಮಾಡುತ್ತಿದ್ದಾರೆ..

ನಾನು ಯಾವತ್ತೂ ಸರ್ಕಾರಿ, ಬಡವರ ಜಮೀನಿಗೆ ಹೋಗಿಲ್ಲ. ನಾನು ರಾಜಕೀಯವಾಗಿ, ಆರ್ಥಿಕವಾಗಿ ಬೆಳೆಯಬಾರದು ಎಂಬ ದುರುದ್ದೇಶದಿಂದ ಹುನ್ನಾರ ಮಾಡಿಕೊಂಡು ಗಲಾಟೆ ಮಾಡಿದ್ದಾರೆ. ನನಗೆ ಹಲ್ಲೆ ಮಾಡಿರುವುದನ್ನು ವಿಡಿಯೋ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ…ಎಂದರು.

ಅವರು ಪೊಜಿಷನಲ್ಲೇ ಇಲ್ಲ. ನೂರು ವರ್ಷದಿಂದ ಅವರ ಬಳಿ ಸೂಕ್ತ ದಾಖಲೆ ಇಲ್ಲ.‌ ನಾನು ಕಾನೂನುಬದ್ಧವಾಗಿ ಜಮೀನು ಕೊಂಡುಕೊಂಡಿದ್ದೇನೆ. ಯಾರದೋ ಜಮೀನಿಗೆ ನಾನ್ಯೇಕೆ ಹೋಗಲಿ. ಹಲ್ಲೆ ನಡೆದ ನಂತರ ರಾಜೀ ಮಾಡಿಕೊಳ್ಳಿ ಅಂತಾ ಫೋನ್ ಬಂದಿತ್ತು, ರಾಜಿಗೆ ಒಪ್ಪದಿದ್ದಾಗ ಕೌಂಟರ್ ಎಫ್ಐ ಆರ್ ಆಗಿದೆ ಎಂದರು.

ನಾನು ಕಾನೂನು ಹೋರಾಟ ನಡೆಸಿ ನನ್ನ ತಪ್ಪು ಏನೂ ಇಲ್ಲ ಎಂದು ಸಾಬೀತುಪಡಿಸುತ್ತೇನೆ. ನನ್ನ ಸಮಾಜ ಸೇವೆ ಮುಂದುವರಿಸುತ್ತೇನೆ. ನನ್ನನ್ನು ನಂಬಿ ಬಂದವರಿಗೆ ನ್ಯಾಯ ಕೊಡಿಸುತ್ತೇನೆ. ರಾಜಕೀಯವಾಗಿ ಸಕ್ರಿಯನಾಗಿರುತ್ತೇನೆ ಎಂದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

4 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

4 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

17 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

19 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago