ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ 23/2, 23/3, 23/4, 23/8 ರಲ್ಲಿ ಸುಮಾರು 20 ಎಕರೆ ಜಮೀನು ನನ್ನ ಮತ್ತು ನನ್ನ ಧರ್ಮಪತ್ನಿರವರು ಕ್ರಯಕ್ಕೆ ಪಡೆದು ಖಾತೆಯಾಗಿರುತ್ತದೆ. 20 ಎಕರೆ ಜಮೀನನ್ನು ಕಾನೂನಾತ್ಮಕವಾಗಿ ಖರೀದಿ ಮಾಡಿದ್ದೇನೆ. ಈ ಹಿನ್ನೆಲೆ ಮಾ.29ರ ಭಾನುವಾರದಂದು ಜಮೀನಿಗೆ ಕಾಂಪೌಂಡ್ ನಿರ್ಮಿಸುವ ವೇಳೆ ದಡಘಟ್ಟಮಡಗು ಗ್ರಾಮದ ಒಂದು ಕುಟುಂಬದ 19 ಮಂದಿ, ಜೊತೆಗೆ ಅವರ ಹತ್ತಿರ ಸಂಬಂಧಿಗಳು ಸಹ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಹಲ್ಲೆ ದುರುದ್ದೇಶದ್ದಾಗಿರುತ್ತದೆ. ನಾನು ಅವರ ಜಮೀನನ್ನು ಕಬಳಿಕೆ ಮಾಡಿಲ್ಲ. ನಾನು ಕಾಂಪೌಂಡ್ ಹಾಕುತ್ತಿರುವ ಜಮೀನಿಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ ನಮ್ಮ ಮೇಲೆ ದೌರ್ಜನ್ಯವೆಸಗಿ ಹಲ್ಲೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ವಕೀಲ ಪ್ರತಾಪ್ ಆರೋಪಿಸಿದರು.
ಈ ಕುರಿತು ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಮೋಸ, ವಂಚನೆ, ಕಾನೂನು ಉಲ್ಲಂಘನೆ ಮಾಡಿ ಯಾವ ಭೂಮಿಯನ್ನು ಖರೀದಿ ಮಾಡಿಲ್ಲ. ಅದೇರೀತಿ ನೇರವಾಗಿ ನಾನು ಯಾವತ್ತೂ, ಯಾವ ರೈತನಿಂದಲೂ ಜಮೀನು ಖರೀದಿ ಮಾಡಿಲ್ಲ. ರೈತರು ಬೇರೆಯವರಿಗೆ ಮಾರಾಟ ಮಾಡಿರುವ ವ್ಯಕ್ತಿಗಳಿಂದ ಕೊಳ್ಳುತ್ತೇನೆ ಎಂದರು..
ನಾನು ಕಷ್ಟಪಟ್ಟು ದುಡಿದ ಹಣದಲ್ಲಿ ಸಮಾಜ ಸೇವೆ ಮಾಡುತ್ತಿದ್ದೇನೆ. ರಾಜಕೀಯವಾಗಿ ಸಕ್ರಿಯನಾಗಿದ್ದೇನೆ. ಈ ನನ್ನ ಏಳಿಗೆ ಸಹಿಸದೇ ದುರುದ್ದೇಶದಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರಲು ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದರು…
ಅವರು ಜಮೀನು ವಿವಾದದಲ್ಲಿ ಕೋರ್ಟ್ ನಲ್ಲಿ ಕೇಸ್ ಹಾಕಿದ್ದರು. ಎಲ್ಲಾ ಕೇಸ್ ಡಿಸ್ ಮಿಸ್ ಆಗಿದೆ. ಯಾವುದೇ ಸ್ಟೇ ಇಲ್ಲ, ಯಾವುದೇ ಕೇಸ್ ಇಲ್ಲದೇ ಇದ್ದರೂ, ಇದು ನನ್ನ ಜಮೀನು ಎಂದು ಸುಖಾಸುಮ್ಮನೆ ಗಲಾಟೆ ಮಾಡುತ್ತಿದ್ದಾರೆ..
ನಾನು ಯಾವತ್ತೂ ಸರ್ಕಾರಿ, ಬಡವರ ಜಮೀನಿಗೆ ಹೋಗಿಲ್ಲ. ನಾನು ರಾಜಕೀಯವಾಗಿ, ಆರ್ಥಿಕವಾಗಿ ಬೆಳೆಯಬಾರದು ಎಂಬ ದುರುದ್ದೇಶದಿಂದ ಹುನ್ನಾರ ಮಾಡಿಕೊಂಡು ಗಲಾಟೆ ಮಾಡಿದ್ದಾರೆ. ನನಗೆ ಹಲ್ಲೆ ಮಾಡಿರುವುದನ್ನು ವಿಡಿಯೋ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ…ಎಂದರು.
ಅವರು ಪೊಜಿಷನಲ್ಲೇ ಇಲ್ಲ. ನೂರು ವರ್ಷದಿಂದ ಅವರ ಬಳಿ ಸೂಕ್ತ ದಾಖಲೆ ಇಲ್ಲ. ನಾನು ಕಾನೂನುಬದ್ಧವಾಗಿ ಜಮೀನು ಕೊಂಡುಕೊಂಡಿದ್ದೇನೆ. ಯಾರದೋ ಜಮೀನಿಗೆ ನಾನ್ಯೇಕೆ ಹೋಗಲಿ. ಹಲ್ಲೆ ನಡೆದ ನಂತರ ರಾಜೀ ಮಾಡಿಕೊಳ್ಳಿ ಅಂತಾ ಫೋನ್ ಬಂದಿತ್ತು, ರಾಜಿಗೆ ಒಪ್ಪದಿದ್ದಾಗ ಕೌಂಟರ್ ಎಫ್ಐ ಆರ್ ಆಗಿದೆ ಎಂದರು.
ನಾನು ಕಾನೂನು ಹೋರಾಟ ನಡೆಸಿ ನನ್ನ ತಪ್ಪು ಏನೂ ಇಲ್ಲ ಎಂದು ಸಾಬೀತುಪಡಿಸುತ್ತೇನೆ. ನನ್ನ ಸಮಾಜ ಸೇವೆ ಮುಂದುವರಿಸುತ್ತೇನೆ. ನನ್ನನ್ನು ನಂಬಿ ಬಂದವರಿಗೆ ನ್ಯಾಯ ಕೊಡಿಸುತ್ತೇನೆ. ರಾಜಕೀಯವಾಗಿ ಸಕ್ರಿಯನಾಗಿರುತ್ತೇನೆ ಎಂದರು.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…