ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ 23/2, 23/3, 23/4, 23/8 ರಲ್ಲಿ ಸುಮಾರು 20 ಎಕರೆ ಜಮೀನು ನನ್ನ ಮತ್ತು ನನ್ನ ಧರ್ಮಪತ್ನಿರವರು ಕ್ರಯಕ್ಕೆ ಪಡೆದು ಖಾತೆಯಾಗಿರುತ್ತದೆ. 20 ಎಕರೆ ಜಮೀನನ್ನು ಕಾನೂನಾತ್ಮಕವಾಗಿ  ಖರೀದಿ ಮಾಡಿದ್ದೇನೆ. ಈ ಹಿನ್ನೆಲೆ ಮಾ.29ರ ಭಾನುವಾರದಂದು ಜಮೀನಿಗೆ ಕಾಂಪೌಂಡ್ ನಿರ್ಮಿಸುವ ವೇಳೆ ದಡಘಟ್ಟಮಡಗು ಗ್ರಾಮದ ಒಂದು ಕುಟುಂಬದ 19 ಮಂದಿ, ಜೊತೆಗೆ ಅವರ ಹತ್ತಿರ ಸಂಬಂಧಿಗಳು ಸಹ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಹಲ್ಲೆ ದುರುದ್ದೇಶದ್ದಾಗಿರುತ್ತದೆ. ನಾನು ಅವರ ಜಮೀನನ್ನು ಕಬಳಿಕೆ ಮಾಡಿಲ್ಲ. ನಾನು ಕಾಂಪೌಂಡ್ ಹಾಕುತ್ತಿರುವ ಜಮೀನಿಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ ನಮ್ಮ ಮೇಲೆ ದೌರ್ಜನ್ಯವೆಸಗಿ ಹಲ್ಲೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ವಕೀಲ ಪ್ರತಾಪ್ ಆರೋಪಿಸಿದರು.

ಈ ಕುರಿತು ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಮೋಸ, ವಂಚನೆ, ಕಾನೂನು ಉಲ್ಲಂಘನೆ ಮಾಡಿ ಯಾವ ಭೂಮಿಯನ್ನು ಖರೀದಿ ಮಾಡಿಲ್ಲ.‌ ಅದೇರೀತಿ ನೇರವಾಗಿ ನಾನು ಯಾವತ್ತೂ, ಯಾವ ರೈತನಿಂದಲೂ ಜಮೀನು ಖರೀದಿ‌ ಮಾಡಿಲ್ಲ. ರೈತರು ಬೇರೆಯವರಿಗೆ ಮಾರಾಟ ಮಾಡಿರುವ ವ್ಯಕ್ತಿಗಳಿಂದ ಕೊಳ್ಳುತ್ತೇನೆ ಎಂದರು..

ನಾನು ಕಷ್ಟಪಟ್ಟು ದುಡಿದ ಹಣದಲ್ಲಿ ಸಮಾಜ ಸೇವೆ ಮಾಡುತ್ತಿದ್ದೇನೆ. ರಾಜಕೀಯವಾಗಿ ಸಕ್ರಿಯನಾಗಿದ್ದೇನೆ‌. ಈ ನನ್ನ ಏಳಿಗೆ ಸಹಿಸದೇ ದುರುದ್ದೇಶದಿಂದ ನನ್ನ ಹೆಸರಿಗೆ ಕಪ್ಪುಚುಕ್ಕೆ ತರಲು ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿದರು…

ಅವರು ಜಮೀನು ವಿವಾದದಲ್ಲಿ ಕೋರ್ಟ್ ನಲ್ಲಿ ಕೇಸ್ ಹಾಕಿದ್ದರು. ಎಲ್ಲಾ ಕೇಸ್ ಡಿಸ್ ಮಿಸ್ ಆಗಿದೆ. ಯಾವುದೇ ಸ್ಟೇ ಇಲ್ಲ, ಯಾವುದೇ ಕೇಸ್ ಇಲ್ಲದೇ ಇದ್ದರೂ, ಇದು ನನ್ನ ಜಮೀನು ಎಂದು ಸುಖಾಸುಮ್ಮನೆ ಗಲಾಟೆ ಮಾಡುತ್ತಿದ್ದಾರೆ..

ನಾನು ಯಾವತ್ತೂ ಸರ್ಕಾರಿ, ಬಡವರ ಜಮೀನಿಗೆ ಹೋಗಿಲ್ಲ. ನಾನು ರಾಜಕೀಯವಾಗಿ, ಆರ್ಥಿಕವಾಗಿ ಬೆಳೆಯಬಾರದು ಎಂಬ ದುರುದ್ದೇಶದಿಂದ ಹುನ್ನಾರ ಮಾಡಿಕೊಂಡು ಗಲಾಟೆ ಮಾಡಿದ್ದಾರೆ. ನನಗೆ ಹಲ್ಲೆ ಮಾಡಿರುವುದನ್ನು ವಿಡಿಯೋ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ…ಎಂದರು.

ಅವರು ಪೊಜಿಷನಲ್ಲೇ ಇಲ್ಲ. ನೂರು ವರ್ಷದಿಂದ ಅವರ ಬಳಿ ಸೂಕ್ತ ದಾಖಲೆ ಇಲ್ಲ.‌ ನಾನು ಕಾನೂನುಬದ್ಧವಾಗಿ ಜಮೀನು ಕೊಂಡುಕೊಂಡಿದ್ದೇನೆ. ಯಾರದೋ ಜಮೀನಿಗೆ ನಾನ್ಯೇಕೆ ಹೋಗಲಿ. ಹಲ್ಲೆ ನಡೆದ ನಂತರ ರಾಜೀ ಮಾಡಿಕೊಳ್ಳಿ ಅಂತಾ ಫೋನ್ ಬಂದಿತ್ತು, ರಾಜಿಗೆ ಒಪ್ಪದಿದ್ದಾಗ ಕೌಂಟರ್ ಎಫ್ಐ ಆರ್ ಆಗಿದೆ ಎಂದರು.

ನಾನು ಕಾನೂನು ಹೋರಾಟ ನಡೆಸಿ ನನ್ನ ತಪ್ಪು ಏನೂ ಇಲ್ಲ ಎಂದು ಸಾಬೀತುಪಡಿಸುತ್ತೇನೆ. ನನ್ನ ಸಮಾಜ ಸೇವೆ ಮುಂದುವರಿಸುತ್ತೇನೆ. ನನ್ನನ್ನು ನಂಬಿ ಬಂದವರಿಗೆ ನ್ಯಾಯ ಕೊಡಿಸುತ್ತೇನೆ. ರಾಜಕೀಯವಾಗಿ ಸಕ್ರಿಯನಾಗಿರುತ್ತೇನೆ ಎಂದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

21 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago