ನಾನು ಸಚಿವನಾಗಲು ಜಾಲಪ್ಪ ಕೂಡ ಕಾರಣಕರ್ತರು- ಸಿ.ಎಂ ಸಿದ್ದರಾಮಯ್ಯ

ಆರ್.ಜಾಲಪ್ಪ ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ “ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ” ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ, ರೈತರಿಗೆ, ಕೃಷಿಗೆ ಅತ್ಯಂತ ಮಹತ್ವ ನೀಡಿದ್ದನ್ನು ಸಿಎಂ ಸ್ಮರಿಸಿದರು.

ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪ ಅವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದನ್ನು ಉಲ್ಲೇಖಿಸಿ ಶ್ಲಾಘಿಸಿದರು.

ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನನಗೂ, ಜೆ.ಹೆಚ್.ಪಟೇಲರಿಗೂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದನ್ನು ನೆನಪಿಸಿಕೊಂಡರು.

ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ ಎಂದರು.

ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು. ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು. ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

ನಂತರ ಶಾಸಕ ಧೀರಜ್ ಮುನಿರಾಜ್ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕಿನ ಎಪಿಎಂಸಿಗೆ ಜಾಲಪ್ಪ ಅವರ ಹೆಸರನ್ನು ಇಡಬೇಕು. ತಾಲೂಕಿನ ನಿರಾಶ್ರಿತರಿಗೆ ಮನೆಭಾಗ್ಯ ಒದಗಿಸಿಕೊಡಬೇಕು. ಕಾವೇರಿ ನೀರನ್ನು ದೊಡ್ಡಬಳ್ಳಾಪುರಕ್ಕೂ ನೀಡಬೇಕು. ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಶಿಕ್ಷಣ ಸಚಿವ ಮಧುಬಂಗಾರಪ್ಪ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ, ಉಗ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

33 minutes ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago