ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಶಾಸಕ ಬೇಳೂರು ಗೋಪಾಲಕೃಷ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಬಳಿಕವೇ ಮುಖ್ಯಮಂತ್ರಿ ಕುರಿತ ಅಂತಿಮ ತೀರ್ಮಾನ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
“ಭಾನುವಾರ ಸಿಎಲ್ಪಿ ಸಭೆ ನಡೆಯಲಿದ್ದು, ಹೈಕಮಾಂಡ್ ಸೂಚನೆಯಂತೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಅಥವಾ ಬುಧವಾರ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ,” ಎಂದು ಹೇಳಿದರು.
ಇದೇ ವೇಳೆ ಸಚಿವ ಸಂಪುಟ ರಚನೆ ಕುರಿತೂ ಪ್ರತಿಕ್ರಿಯೆ ನೀಡಿದ ಅವರು, “ಮುಖ್ಯಮಂತ್ರಿ ಆಯ್ಕೆಯಾದ ನಂತರ ಸಚಿವ ಸಂಪುಟದ ಕುರಿತು ತೀರ್ಮಾನವಾಗುತ್ತದೆ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಯಾರಿಗೆ ಯಾವ ಖಾತೆ ಅಥವಾ ಸಚಿವ ಸ್ಥಾನ ಸಿಗಲಿದೆ ಎಂಬುದನ್ನು ಕಾದು ನೋಡಬೇಕು,” ಎಂದು ತಿಳಿಸಿದ್ದಾರೆ.
ರಾಜ್ಯ ರಾಜಕೀಯ ಬೆಳವಣಿಗೆಗಳ ನಡುವೆಯೇ ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…