‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…