‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…