‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…