‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…