‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದಿಂದ ದೊಡ್ಡಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಎಂಎಫ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಬಿ.ಸಿ.ಆನಂದಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಫೇಸ್ ಬುಕ್ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವದಂತಿಯನ್ನು ಬಿ.ಸಿ.ಆನಂದಕುಮಾರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.
ಕ್ಷೇತ್ರದ ಮತದಾರರ ದಿಕ್ಕು ತಪ್ಪಿಸಲೆಂದೇ ಕೆಲ ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಜಾಲತಾಣಗಳಲ್ಲಿ ಹುಸಿಸುದ್ದಿ ಪ್ರಕಟಿಸಿದ್ದಾರೆ. ಜೊತೆಗೆ ಬೇಕೆಂತಲೇ ವೈರಲ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದೊಂದು ಸುಳ್ಳು ಸುದ್ದಿ, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಮಾಡುತ್ತಿರುವ ಷಡ್ಯಂತ್ರ್ಯ. ಮಾಧ್ಯಮ ಬೆಳಕು ಎಂಬ ಫೇಸ್ ಬುಕ್ ಪೇಜ್ ನಲ್ಲಿ ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದೇನೆ, ಜನವರಿ 20 ರೊಳಗೆ ಸೂಕ್ತ ಅಭ್ಯರ್ಥಿ ಘೋಷಿಸುವಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಗಡುವು ಸಹ ನೀಡಿದ್ದೇವೆ. ಹೀಗಿರುವಾಗ ಹೊಸ ಪಕ್ಷದಿಂದ ಚುನಾವಣೆಗೆ ಇಳಿಯಬೇಕಾದ ಅನಿವಾರ್ಯತೆ ಬಂದಿಲ್ಲ. ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇಂತಹ ವದಂತಿಗಳಿಗೆ ಅಭಿಮಾನಿಗಳು, ಕಾರ್ಯಕರ್ತರು ಕಿವಿಗೊಡಬಾರದು ಎಂದು ಬಿ.ಸಿ.ಆನಂದ್ ಕುಮಾರ್ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…