Categories: ಕೋಲಾರ

ನಾನೇನು ಕೊಲೆಗಾರನಲ್ಲ ಯಾವುದೇ ತನಿಖೆಗೂ ಸಿದ್ಧ: ನನ್ನ ಜಾತಿ ಪ್ರಮಾಣ ಪತ್ರದ ಬಗ್ಗೆ ಕೆಲವರಿಂದ ಅಪಪ್ರಚಾರ-ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: 2018ರಲ್ಲಿ ನನ್ನ ಮೇಲೆ ಕೇಸ್‌ ದಾಖಲಾಗಿತ್ತು. ಅದರ ಮೇಲೆ ನಾನು ತಡೆಯಾಜ್ಞೆ ತಂದಿದ್ದೆ. ನಂತರ ವಜಾ ಮಾಡಲು ಕೋರಿದ್ದೆ. ಆದರೆ, ಈಗ ಅದನ್ನು ತಳ್ಳಿ ಹಾಕಿ ಪ್ರಕರಣ ಸಂಬಂಧ ನನ್ನ ಮೇಲೆ ತನಿಖೆಗೆ ಆದೇಶಿಸಲಾಗಿದೆ. ಯಾರೇ ವಿಚಾರಣೆಗೆ ಕರೆದರೂ ನಾನು ಸಹಕರಿಸುತ್ತೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ತಮ್ಮ ಕಚೇರಿಯಲ್ಲಿ ತಮ್ಮ ಮೇಲಿನ ಎಫ್‌ಐಆರ್‌ ವಿರುದ್ಧದ ಮೇಲ್ಮನವಿ ವಜಾ ಸಂಬಂಧ ಪ್ರತಿಕ್ರಿಯಿಸಿ ಅವರು ಈಗ ಏನೇನೋ ಊಹಾಪೋಹ ಎದ್ದಿದೆ. 2010ರಿಂದ ಇಂಥ ವಿಚಾರಗಳೇ ಚರ್ಚೆಯಲ್ಲಿವೆ. ಕೊತ್ತೂರು ಮಂಜುನಾಥ್‌ಗೆ ಈ ರೀತಿ ಆಗುತ್ತದೆ, ಆ ರೀತಿ ಆಗುತ್ತದೆ. ಶಾಸಕ ಸ್ಥಾನ ಹೋಗಿಬಿಡುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರೀತಿ ಹೇಳಿಹೇಳಿಯೇ 2013ರ ವಿಧಾನಸಭೆ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ನನ್ನ ಮೇಲೆ ಸೋತಿದ್ದ ಮುನಿಆಂಜಿನಪ್ಪ ಅವರನ್ನು ದಾರಿ ತಪ್ಪಿಸಿದ್ದರು. ಆತನಿಂದ ನ್ಯಾಯಾಲಯದಲ್ಲಿ ಸುಳ್ಳು ಹೇಳಿಸಿದರು. ಈಗ ಅಂಥ ಮಾತು ಮತ್ತೆ ಶುರುವಾಗಿದೆ. ಏನೇನೋ ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದರು.

ನನ್ನ ಬಗ್ಗೆ ಪೂರ್ಣ ಮಾಹಿತಿ ಬೇಕೆಂದರೆ ನನ್ನ ಗ್ರಾಮ ಪಂಚಾಯಿತಿಗೆ ಹೋಗಿ ಕೇಳಿದರೆ ಸಿಗುತ್ತದೆ. ನನ್ನ ತಂದೆ, ತಾಯಿ, ಹುಟ್ಟೂರು, ಅಜ್ಜ, ಅಜ್ಜಿ ಬಗ್ಗೆ ಮಾಹಿತಿ ಗೊತ್ತಾಗುತ್ತದೆ. ಮುಳಬಾಗಿಲಿನಲ್ಲಿ ನನ್ನ ಮೇಲೆ ಯಾರಾದರೂ ಪ್ರತಿಭಟನೆ ನಡೆಸಿದ್ದಾರೆಯೇ’ ಎಂದು ಪ್ರಶ್ನಿಸಿದ ಅವರು ಪ್ರಕರಣದಲ್ಲಿ ವಿಚಾರಣೆಗೆ ಸಹಕಾರ ನೀಡುತ್ತೇನೆ. ತಪ್ಪಿಸಿಕೊಂಡು ಎಲ್ಲಿಗೂ ಹೋಗಲ್ಲ. ಸಮಸ್ಯೆ ಏನಾದರೂ ಇದ್ದಿದ್ದರೆ ಕಚೇರಿಯಲ್ಲಿ ಬಂದು ಕುಳಿತುಕೊಳ್ಳುತ್ತಿದ್ದೆನೆ ನಾನೇನು ಕೊಲೆ ಮಾಡಿದ್ದೇನೆಯೇ ಎಂದರು.

ಬಿಜೆಪಿಯವರು ಆರೋಪ ಮಾಡಿದಂತೆ ಸಿ.ಟಿ.ರವಿ ಅವರನ್ನು ಕೊಲೆ ಮಾಡಲು ಯಾರೂ ಪ್ರಯತ್ನಿಸಿಲ್ಲ. ಕೊಲೆ ಮಾಡುವುದು ಎಂದರೆ ಏನು ದೇವಸ್ಥಾನದ ಮುಂದೆ ಕೋಳಿ, ಕುರಿ ಕುಯ್ಯುವುದೇ ಅಂದು ಬೆಳಗಾವಿಯಲ್ಲಿ ಅವರನ್ನು ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಒಂದು ವೇಳೆ ಆ ಸ್ಥಳದಲ್ಲಿದ್ದು, ಗಲಾಟೆ ಆಗಿದ್ದಾರೆ ಯಾರು ಜವಾಬ್ದಾರಿ ಆಗುತ್ತಿದ್ದರು ಆಗ ಪೊಲೀಸರು ಭದ್ರತೆ ನೀಡಿಲ್ಲ ಎಂಬುದಾಗಿ ಬಿಜೆಪಿಯವರು ತಗಾದೆ ತೆಗೆಯುತ್ತಿದ್ದರು ಶಾಸಕರನ್ನು ಕೊಲೆ ಮಾಡುವುದೆಂದರೆ ತಮಾಷೆನಾ ಹುಡುಗಾಟನಾ ಬಿಜೆಪಿಯವರು ಏನೋ ಮಾತನಾಡುತ್ತಾರೆ. ಅದು ಅಷ್ಟೊಂದು ಸುಲಭದ ಕೆಲಸವಲ್ಲ ಎಂದು ತಿರುಗೇಟು ನೀಡಿದರು.

ಶಾಸಕ ಮುನಿರತ್ನ ಮೇಲೆ ಯಾರೂ ಪುಂಡರು ಮೊಟ್ಟೆ ಎಸೆದಿರಬಹುದು. ಕೊಲೆ ಮಾಡುವಂತಿದ್ದರೆ ಯಾರಾದರೂ ಹೇಳಿಕೊಂಡು ಬಂದು ಕೊಲೆ ಮಾಡುತ್ತಾರೆಯೇ? ಅದರಲ್ಲೂ ತಲೆ ಮಧ್ಯ ಭಾಗಕ್ಕೆ ಗುರಿ ಇಟ್ಟು ಮೊಟ್ಟೆ ಎಸೆದಿದ್ದಾರೆ. ಶಾರ್ಟ್‌ ಶೂಟರ್‌ಗಳಿಗೆ ಮಾತ್ರ ಅದು ಸಾಧ್ಯ. ನನ್ನ ಪ್ರಕಾರ ಮುನಿರತ್ನ ಅವರೇ ಹೇಳಿ ಮೊಟ್ಟೆ ಹೊಡೆಸಿಕೊಂಡಿರಬಹುದು. ಆಕಸ್ಮಾತ್‌ ಉದ್ದೇಶಪೂರ್ವಕವಾಗಿ ಎಸೆದಿದ್ದರೆ ತಪ್ಪು. ಅವರೊಬ್ಬ ಶಾಸಕ. ಆ ರೀತಿ ಮಾಡಬಾರದು. ಶಾಸಕರಿಗೆ ಘನತೆ, ಗೌರವವಿರುತ್ತದೆ. ಹೀಗಾಗಿ, ತನಿಖೆ ನಡೆಸಿ ಕ್ರಮ ಆಗಬೇಕು ಎಂದರು.

ಹೆಚ್ಚುವರಿ 30 ಕೋಟಿ ಅನುದಾನ: ‘ರಸ್ತೆ ಅಭಿವೃದ್ಧಿಗೆಂದು ಕೋಲಾರಕ್ಕೆ 30 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಕಾಮಗಾರಿಗಳಿಗೆ ಟೆಂಡರ್‌ ಆಗಿದೆ. ಹಳ್ಳಿಗಳಲ್ಲೂ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಹಿಂದೆ ಪಿಎಂಜಿವೈಎಸ್‌, ಸಿಎಂಜಿವೈಎಸ್‌ ಯೋಜನೆ ಇದ್ದದ್ದು ಈಗ ಪ್ರಗತಿ ಪಥವಾಗಿದೆ. ಈ ಯೋಜನೆಯಡಿ ಪ್ರತಿ ಕ್ಷೇತ್ರದಲ್ಲಿ 40 ಕಿ.ಮೀ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಪ್ರಸ್ತಾವ ಕಳುಹಿಸಿಕೊಡಲಾಗಿದೆ’ ಎಂದರು.

‘ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ಎಐಸಿಸಿ ಸಭೆ ನಡೆದು ನೂರು ವರ್ಷಗಳಾಗಿದೆ. ಆ ನೆನಪಿನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಸಮಾವೇಶ ನಡೆಯುತ್ತಿದ್ದು, ಶುಕ್ರವಾರದ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಅಫ್ಸರ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಖಾದ್ರಿಪುರ ಬಾಬು, ಕಿಲಾರಿಪೇಟೆ ಮಣಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…

3 minutes ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ-‌ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…

12 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…

2 hours ago

ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…

4 hours ago

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ: ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವು

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…

6 hours ago

2100 ಎಕರೆ ಭೂ ಸ್ವಾಧೀನ ಕೈಬಿಡಬೇಕು- ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು…

7 hours ago