ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ- ಸಿಎಂ ಸಿದ್ದರಾಮಯ್ಯ

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ (BJP) ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಸಿಎಡಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ? ಎಂದು ಪ್ರಶ್ನೆ ಮಾಡಿದರು.

ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಆನ್‌ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ ಅಂಥವರು ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 hour ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

5 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

5 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

10 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

22 hours ago