ನಾಪತ್ತೆಯಾಗಿದ್ದ ಮಹಿಳೆ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೆಬ್ಬೇನಹಳ್ಳಿಯಲ್ಲಿ ನಡೆದಿದೆ.
ಪೂಜಾ(25) ಮೃತ ಮಹಿಳೆ. ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಪೂಜಾ ಪೋಷಕರ ಆರೋಪವಾಗಿದೆ.
ಪತಿ ಓಂಕಾರ್, ಆತನ ಅಣ್ಣ ರಾಜಣ್ಣ ಮೇಲೆ ಆರೋಪ ಮಾಡಲಾಗಿದೆ.
ಪತಿ ಓಂಕಾರ್ ಅವರ ಅಣ್ಣ ರಾಜಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಪೂಜಾಳನ್ನ ಗಂಡನ ಮನೆಗೆ ಕರೆದೊಯ್ದಿದ್ದ. ಎರಡು ದಿನಗಳಿಂದ ಪೂಜಾ ನಾಪತ್ತೆಯಾಗಿದ್ದಳು. ಇಂದು ಸೆಬ್ಬೇನಹಳ್ಳಿಯ ಹೊಂಡದಲ್ಲಿ ಪೂಜಾಳ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಅಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.