2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.
ಬರಗೂರು ಗ್ರಾಮದ ನಿವಾಸಿ ನಿತಿನ್ (23), ಎಂಬ ಯುವಕ ಬಾಲಕಿಯನ್ನ ಅಪಹರಿಸಿ ಕೊಲೈಗೈದಿರುವ ಶಂಕೆ ವ್ಯಕ್ತವಾಗಿದೆ.
ಕಳೆದ 15 ದಿನಗಳಿಂದ ಆರೋಪಿ ನಿತಿನ್ ಪ್ರೀತಿಸು ಎಂದು ಬಾಲಕಿ ಹಿಂದೆ ಬಿದ್ದು, ಪೀಡಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ನಿರಾಕರಣೆ ಹಿನ್ನೆಲೆ ಬಾಲಕಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕೊಲೆ ನಂತರ ಆರೋಪಿ ನಿತಿನ್ ಆತ್ಮಹತ್ಯೆ ಹೈಡ್ರಾಮ ಮಾಡಿದ್ದಾನೆ. ಸದ್ಯ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಸಂಬಂಧಿಕರು ದಲಿತ ಸಂಘಟನೆ ಮುಖಂಡರೊಂದಿಗೆ ಹೊಸಕೋಟೆ ತಾಲೂಕಿನ ಡಿ.ಹೊಸಹಳ್ಳಿ ಬಳಿ ಹೊಸಕೋಟೆ ಚಿಕ್ಕತಿರುಪತಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ದಲಿತ ಹೆಣ್ಣು ಮಗಳನ್ನ ಕಿಡ್ನಾಪ್ ಮಾಡಿ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಅರೋಪ ಮಾಡಿ, ಬಾಲಕಿ ಮೃತದೇಹವಿರುವ ಅಂಬ್ಯುಲೆನ್ಸ್ ರಸ್ತೆಯಲ್ಲಿ ನಿಲ್ಲಿಸಿ ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಆರೋಪಿ ನಿತಿನ್ ಜೊತೆಗೆ ಇನ್ನೂ ಹಲವರು ಕೃತ್ಯದಲ್ಲಿ ಭಾಗಿ ಆರೋಪ ಮಾಡಲಾಗಿದೆ. ಬಾಲಕಿಯ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯ ಮಾಡಲಾಗಿದೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…