ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಬಾಲಕಿ ಬಲಿ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.

ಬರಗೂರು ಗ್ರಾಮದ ನಿವಾಸಿ ನಿತಿನ್ (23), ಎಂಬ ಯುವಕ ಬಾಲಕಿಯನ್ನ ಅಪಹರಿಸಿ ಕೊಲೈಗೈದಿರುವ ಶಂಕೆ ವ್ಯಕ್ತವಾಗಿದೆ.

ಕಳೆದ 15 ದಿನಗಳಿಂದ ಆರೋಪಿ ನಿತಿನ್ ಪ್ರೀತಿಸು ಎಂದು ಬಾಲಕಿ ಹಿಂದೆ ಬಿದ್ದು, ಪೀಡಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ನಿರಾಕರಣೆ ಹಿನ್ನೆಲೆ ಬಾಲಕಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕೊಲೆ ನಂತರ ಆರೋಪಿ ನಿತಿನ್ ಆತ್ಮಹತ್ಯೆ ಹೈಡ್ರಾಮ ಮಾಡಿದ್ದಾನೆ.‌ ಸದ್ಯ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಪೋಷಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಬಾಲಕಿಯ ಸಂಬಂಧಿಕರು ದಲಿತ ಸಂಘಟನೆ ಮುಖಂಡರೊಂದಿಗೆ ಹೊಸಕೋಟೆ ತಾಲೂಕಿನ ಡಿ.ಹೊಸಹಳ್ಳಿ ಬಳಿ ಹೊಸಕೋಟೆ ಚಿಕ್ಕತಿರುಪತಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ದಲಿತ ಹೆಣ್ಣು ಮಗಳನ್ನ ಕಿಡ್ನಾಪ್ ಮಾಡಿ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಅರೋಪ ಮಾಡಿ, ಬಾಲಕಿ ಮೃತದೇಹವಿರುವ ಅಂಬ್ಯುಲೆನ್ಸ್ ರಸ್ತೆಯಲ್ಲಿ ನಿಲ್ಲಿಸಿ ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.

ಆರೋಪಿ ನಿತಿನ್ ಜೊತೆಗೆ ಇನ್ನೂ ಹಲವರು ಕೃತ್ಯದಲ್ಲಿ ಭಾಗಿ ಆರೋಪ ಮಾಡಲಾಗಿದೆ. ಬಾಲಕಿಯ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯ ಮಾಡಲಾಗಿದೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

10 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago