2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.
ಬರಗೂರು ಗ್ರಾಮದ ನಿವಾಸಿ ನಿತಿನ್ (23), ಎಂಬ ಯುವಕ ಬಾಲಕಿಯನ್ನ ಅಪಹರಿಸಿ ಕೊಲೈಗೈದಿರುವ ಶಂಕೆ ವ್ಯಕ್ತವಾಗಿದೆ.
ಕಳೆದ 15 ದಿನಗಳಿಂದ ಆರೋಪಿ ನಿತಿನ್ ಪ್ರೀತಿಸು ಎಂದು ಬಾಲಕಿ ಹಿಂದೆ ಬಿದ್ದು, ಪೀಡಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ನಿರಾಕರಣೆ ಹಿನ್ನೆಲೆ ಬಾಲಕಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಕೊಲೆ ನಂತರ ಆರೋಪಿ ನಿತಿನ್ ಆತ್ಮಹತ್ಯೆ ಹೈಡ್ರಾಮ ಮಾಡಿದ್ದಾನೆ. ಸದ್ಯ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಸಂಬಂಧಿಕರು ದಲಿತ ಸಂಘಟನೆ ಮುಖಂಡರೊಂದಿಗೆ ಹೊಸಕೋಟೆ ತಾಲೂಕಿನ ಡಿ.ಹೊಸಹಳ್ಳಿ ಬಳಿ ಹೊಸಕೋಟೆ ಚಿಕ್ಕತಿರುಪತಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ದಲಿತ ಹೆಣ್ಣು ಮಗಳನ್ನ ಕಿಡ್ನಾಪ್ ಮಾಡಿ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಅರೋಪ ಮಾಡಿ, ಬಾಲಕಿ ಮೃತದೇಹವಿರುವ ಅಂಬ್ಯುಲೆನ್ಸ್ ರಸ್ತೆಯಲ್ಲಿ ನಿಲ್ಲಿಸಿ ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಆರೋಪಿ ನಿತಿನ್ ಜೊತೆಗೆ ಇನ್ನೂ ಹಲವರು ಕೃತ್ಯದಲ್ಲಿ ಭಾಗಿ ಆರೋಪ ಮಾಡಲಾಗಿದೆ. ಬಾಲಕಿಯ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯ ಮಾಡಲಾಗಿದೆ. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…