ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

3 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

3 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

9 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

10 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

23 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago