ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

8 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago