ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

2 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

4 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

6 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

9 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

20 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

21 hours ago