ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

16 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

22 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago