ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.
ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.
ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.
ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.
ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.
ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:
2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.
ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ
ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:
ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…