ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

18 minutes ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

1 hour ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

4 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

4 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

6 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

7 hours ago