ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

11 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

20 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago