ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ ಟಿ. ವೆಂಕಟರಮಣಯ್ಯ, ಜೆಡಿಎಸ್ ನಿಂದ ಮೂರು ಬಾರಿ ಸೋತಿರುವ ಬಿ.ಮುನೇಗೌಡ, ಬಿಜೆಪಿಯಿಂದ ಹೊಸಮುಖ ಧೀರಜ್ ಮುನಿರಾಜು ಅಖಾಡಕ್ಕಿಳಿಯಲು ಕದನ ಕಲಿಗಳು ಸಿದ್ಧರಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೂಕ್ತ ದಿನ, ಗಳಿಗೆ, ಕಾಲವನ್ನು ನಿರ್ಣಯಿಸಲು ಜ್ಯೋತಿಷಿಗಳ ಮೊರೆಹೋಗಿದ್ದಾರೆ.
ರಾಶಿ, ಜನ್ಮನಕ್ಷತ್ರಕ್ಕೆ ಅನುಗುಣವಾಗಿ ನಾಮಪತ್ರ ಸಲ್ಲಿಕೆಗೆ ಸಮಯವನ್ನು ನಿಗದಿಪಡಿಸಿಕೊಂಡಿರುವ ಅಭ್ಯರ್ಥಿಗಳು, ಈಗಾಗಲೇ ಚುನಾವಣಾಧಿಕಾರಿಗಳ ಕಚೇರಿಯಿಂದ ನಾಮಪತ್ರಗಳನ್ನು ಪಡೆದಿದ್ದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ.

ಏ.13ರಿ೦ದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಇನ್ನು ಐದು ದಿನ ಮಾತ್ರ ಬಾಕಿ.

ಮೊದಲು ಅಖಾಡಕ್ಕಿಳಿದ ಜೆಡಿಎಸ್ ಅಭ್ಯರ್ಥಿ

ಚುನಾವಣೆಗೆ ಈ ಬಾರಿ ಒಂದು ತಿಂಗಳ ಮುಂಚೆಯೇ ಟಿಕೆಟ್ ಖಾತರಿ ಮಾಡಿಕೊಂಡು ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮೊದಲಿಗರಾಗಿ ಕುಟುಂಬದೊಂದಿಗೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಅಧಿಕೃತವಾಗಿ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ 20 ರಂದು ಗುರುವಾರ ನಿಗದಿಯಾಗಿದ್ದು, ಕಾರ್ಯಕರ್ತರ ಬೃಹತ್ ದಂಡಿನೊಂದಿಗೆ ಸಲ್ಲಿಸಲಿದ್ದಾರೆ. ಒಂದು ಉಪಚುನಾವಣೆ ಸೇರಿದಂತೆ ಮೂರು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿರುವ ಮುನೇಗೌಡರಿಗೆ ಈ ಬಾರಿಯಾದರೂ ಮತದಾರರು ಕೈ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಏ.17ಕ್ಕೆ ‘ಕೈ’ ಅಭ್ಯರ್ಥಿ ನಾಮಿನೇಷನ್:

2013, 2108 ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಯ್ಯ 17 ರಂದು ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಶಾಸಕ ಟಿ.ವೆಂಕಟರಮಣಯ್ಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರುವ ನಿರೀಕ್ಷೆಯಲ್ಲಿದ್ದಾರೆ.

ಏ.18ಕ್ಕೆ ಕಮಲ ಕಲಿ ಉಮೇದುವಾರಿಕೆ

ಸತತ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ನಾಯಕ ಧೀರಜ್ ಮುನಿರಾಜು ಮಂಗಳವಾರ 18 ರಂದು ನಾಮಪತ್ರ ಸಲ್ಲಿಸುವ ಮುಖಾಂತರ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ. ತಾಲ್ಲೂಕಿನಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಧೀರಜ್ ಮುನಿರಾಜುಗೆ ಬಿಜೆಪಿಯಿಂದ ಗೆಲುವಿನ ಮಾಲೆ ದೊರೆಯುವ ಒತ್ತಾಸೆಯಲ್ಲಿದ್ದಾರೆ. ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.

ಶಕ್ತಿ ಪ್ರದರ್ಶನ ಅಭ್ಯರ್ಥಿಗಳ ಸಕಲ ಸಿದ್ಧತೆ:

ಚುನಾವಣಾ ಕದನ ಕಲಿಗಳ ನಾಮಪತ್ರ ಸಲ್ಲಿಕೆ ದಿನಾಂಕಗಳು ಪ್ರತ್ಯೇಕವಾಗಿರುವದರಿಂದ ಬೆಂಬಲಿಗರ, ಕಾರ್ಯಕರ್ತರ ಶಕ್ತಿ ಪ್ರದಶರ್ನಕ್ಕೆ ಸಾಕ್ಷಿಯಾಗಲಿದೆ. ಮೆರವಣಿಗೆ, ಹಾರ-ತುರಾಯಿ, ಪಟಾಕಿಗಳನ್ನು ಸಿದ್ಧ ಮಾಡಿಕೊಂಡಿರುವ ಅಭ್ಯರ್ಥಿಗಳು ಗೆಲುವು ನಮ್ಮದೆ ಎಂಬಂತ ಬಲ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago