ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.
ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.
ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.
ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.
ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…