ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.
ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.
ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.
ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.
ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…