ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.
ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.
ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.
ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.
ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…