ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣನೆ ವಿಚಾರ- ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿದ ಕರವೇ

ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.

ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.

ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.

ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.

ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

3 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

3 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

17 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago