ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣನೆ ವಿಚಾರ- ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿದ ಕರವೇ

ನಾಮಫಲಕಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಾಧ್ಯಕ್ಷ ನಾರಾಯಣಗೌಡರ ಬಣ ನಡೆಸಿದ ಬೃಹತ್ ಜನಜಾಗೃತಿ ಪ್ರತಿಭಟನಾ ಹೋರಾಟಕ್ಕೆ ರಾಜ್ಯಾದ್ಯಂತ ಉತ್ತಮ ಬೆಂಬಲ ಸಿಕ್ಕಿದೆ.

ದೊಡ್ಡಬಳ್ಳಾಪುರ ತಾಲೂಕು ರಕ್ಷಣಾ ವೇದಿಕೆ ವತಿಯಿಂದ ಹೋರಾಟಕ್ಕೆ ನೂರಾರು ಕಾರ್ಯಕರ್ತರು ಬೆಂಬಲ ಸೂಚಿಸಿ ಹೋರಾಟದಲ್ಲಿ ಭಾಗವಹಿಸಿದ್ದರು.

ನಾರಾಯಣಗೌಡರ ಆದೇಶದಂತೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡರ ಹಾಗೂ ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ ರವರ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷರಾದ ವಿ.ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ತಾಲೂಕಿನ ನೂರಾರು ಕಾರ್ಯಕರ್ತರು ಹೋರಾಟದ ಕೇಂದ್ರ ಬಿಂದುವಾದ ಸಾದಳ್ಳಿ ಗೇಟ್ ಬಳಿ ವಾಹನಗಳಲ್ಲಿ ತೆರಳಿ ಆಂಗ್ಲ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹಿಸಿ ದಿಕ್ಕಾರ ಕೂಗಿದರು.

ನಂತರ ನಾರಾಯಣಗೌಡರ ಸಲಹೆಯಂತೆ ಮಾಲ್ ಆಫ್ ಏಶಿಯಾಗೆ ಮುತ್ತಿಗೆ ಹಾಕಲು ಬೆಂಗಳೂರು ಕಡೆ ತೆರಳಿದಾಗ ಮಾರ್ಗ ಮಧ್ಯೆ ಪೊಲೀಸರು ದೊಡ್ಡಬಳ್ಳಾಪುರದ ಹೋರಾಟಗಾರರನ್ನು ತಡೆದು ವಾಪಸ್ ಕಳಿಸಿದರು.

ಇದರ ಮಧ್ಯೆ ದಾರಿಯಲ್ಲಿ ಸಿಕ್ಕ ಆಂಗ್ಲ ಭಾಷೆಯ ನಾಮಫಲಕಗಳನ್ನು ಕಿತ್ತು ಬಿಸಾಡಿ ವಲಸಿಗರ ಹಾಗೂ ಕನ್ನಡ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯಲ್ಲಿ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟರಾಜು, ಮಹಿಳಾ ಘಟಕದ ಗೀತಾ, ಶೋಭಾ ಹಾಗೂ ಯುವ ಘಟಕದ ಹಲವಾರುಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

6 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago