“ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022” ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕ-2024” ರನ್ವಯ ಕನ್ನಡ ಭಾಷೆಯನ್ನು ಫಲಕಗಳ ಮೇಲ್ಬಾಗದಲ್ಲಿ ಶೇ 60%ರಷ್ಟು ಕಾಣುವಂತೆ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲು ಆದೇಶವಾಗಿರುತ್ತದೆ.
ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರದ ಇಲಾಖೆಗಳು, ಸ್ವಾಯುತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಸರ್ಕಾರಿ ಆದೇಶದಂತೆ ಕಡ್ಡಾಯವಾಗಿ ಶೇ60%ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…