ನಾಯಕತ್ವ ರೂಢಿಸಿಕೊಳ್ಳಲು ಎನ್‌ಎಸ್‌ಎಸ್‌ ಪೂರಕ-ನಿವೃತ್ತ ಪ್ರಾಧ್ಯಾಪಕ ಚಂದ್ರಪ್ಪ

ದೊಡ್ಡಬಳ್ಳಾಪುರ: ಯುವಜನತೆ ಸಾಮಾಜಿಕ ಕಾಳಜಿಯನ್ನು ಬೆಳೆಸಿಕೊಳ್ಳುವ ಮೂಲಕ ನಾಯಕತ್ವ ಗುಣಗಳನ್ನು ವೃದ್ದಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಚಂದ್ರಪ್ಪ ಅಭಿಪ್ರಾಯಪಟ್ಟರು.

ನಗರದ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಮಂಗಳವಾರ ನಡೆದ ಎನ್‌ಎಸ್‌ಎಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಎನ್‌ಎಸ್‌ಎಸ್‌ ಇಂದು ಭಾರತದ ಬಹುತೇಕ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಘಟಕಗಳನ್ನು ಹೊಂದಿದ್ದು, ಲಕ್ಷಾಂತರ ಯುವ ಸ್ವಯಂ ಸೇವಕರನ್ನು ಒಳಗೊಂಡಿದೆ. ಜಾಗತಿಕ ಮಟ್ಟದಲ್ಲಿ ಅತಿ ದೊಡ್ಡ ಯುವಜನ ಸಂಘಟನೆ ಎಂದು ಗುರುತಿಸಲ್ಪಟ್ಟಿದೆ ಎಂದ ಅವರು, ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಗಳ ಜೊತೆಗೆ ಎನ್‌ಎಸ್‌ಎಸ್‌ನಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು.

ವ್ಯಕ್ತಿತ್ವ ನಿರ್ಮಾಣಕ್ಕೆ ಒತ್ತು ನೀಡಿ ವಿಭಿನ್ನ ಆಲೋಚನಾ ಕ್ರಮವನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯತೆಯಾಗಿದ್ದು, ಸಡಿಲಗೊಳ್ಳುತ್ತಿರುವ ಮಾನವೀಯ ಸಂಬಂಧಗಳನ್ನು ಬೆಸೆಯುವ ಮಾರ್ಗವಾಗಿ ಎನ್‌ಎಸ್‌ಎಸ್‌ ಮಹತ್ವ ಪಡೆದಿದೆ ಎಂದು ತಿಳಿಸಿದರು.

ಉಪಪ್ರಾಂಶುಪಾಲ ಪ್ರೊ.ದಕ್ಷಿಣಾಮೂರ್ತಿ, ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್‌, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ, ನಿರ್ವಹಣಾ ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ಅಧ್ಯಾಪಕರಾದ ಬಾಬುಸಾಬಿ, ವೆಂಕಟೇಶ್‌, ಭಾನುಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago