ನಾಯಕರಂಡನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಒಂದು ಗಂಟೆಯಿಂದ ಬಸ್ಸಿನಲ್ಲಿ ಸಿಲುಕಿರುವ ಬಾಲಕನನ್ನು ಹೊರತೆಗೆಯಲು ಹರಸಾಹಸಪಡಲಾಗುತ್ತಿದೆ….
ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ಹಾದು ಹೋಗುವ ಹಿಂದೂಪುರ-ಯಲಹಂಕ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ಲಾರಿ ನಡುವೆ ಭೀಕರ ಅಪಘಾತ ನಡೆದಿದೆ…
ಡಿಕ್ಕಿ ರಭಸಕ್ಕೆ ಕೆಎಸ್ ಆರ್ ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಮುಂಭಾಗದಲ್ಲಿ ಕುಳಿತಿದ್ದ ಬಾಲಕ ಬಸ್ಸಿನಲ್ಲಿ ಸಿಲುಕಿಕೊಂಡಿದ್ದಾನೆ. ಬಾಲಕನನ್ನು ರಕ್ಷಣೆ ಮಾಡಲು ಸತತ ಒಂದೂವರೆ ಗಂಟೆಯಿಂದಲೂ ಪ್ರಯತ್ನ ಮಾಡಲಾಗುತ್ತಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಬಾಲಕನನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ಗೌರಿಬಿದನೂರು ಕಡೆಯಿಂದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಲ್ಲಿದ್ದಲು ತುಂಬಿದ್ದ ಲಾರಿ ಬರುತ್ತಿದ್ದವು. ಮುಂದೆ ಕಲ್ಲಿದ್ದಲು ತುಂಬಿದ್ದ ಲಾರಿ ಹೋಗುತ್ತಿತ್ತು. ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ..
ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ….
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…