ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ.
* ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.
* 2030ರ ವೇಳೆಗೆ ನಾಯಿ ಕಡಿತದ ಸಾವುಗಳನ್ನು ಶೂನ್ಯಕ್ಕೆ ತರುವ (Dog-Mediated Rabies by 2030) ಮತ್ತು ಸಾವುಗಳಾಗದಂತೆ ತಡೆಯಲು ಔಷಧಿ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ,
* ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್ನ ದಾಸ್ತಾನು (Stock) ಇರಿಸಿಕೊಳ್ಳಬೇಕು.
* ರೇಬೀಸ್ಅನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.
* ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.
* ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ, ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.
* ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…