ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ.

* ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.

* 2030ರ ವೇಳೆಗೆ ನಾಯಿ ಕಡಿತದ ಸಾವುಗಳನ್ನು ಶೂನ್ಯಕ್ಕೆ ತರುವ (Dog-Mediated Rabies by 2030) ಮತ್ತು ಸಾವುಗಳಾಗದಂತೆ ತಡೆಯಲು ಔಷಧಿ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ,

* ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು.

* ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.

* ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ  ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.

* ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ, ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.

* ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

3 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

16 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago