ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ.

* ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು.

* 2030ರ ವೇಳೆಗೆ ನಾಯಿ ಕಡಿತದ ಸಾವುಗಳನ್ನು ಶೂನ್ಯಕ್ಕೆ ತರುವ (Dog-Mediated Rabies by 2030) ಮತ್ತು ಸಾವುಗಳಾಗದಂತೆ ತಡೆಯಲು ಔಷಧಿ ಕಂಡುಕೊಳ್ಳುವ ಉದ್ದೇಶ ಹೊಂದಲಾಗಿದೆ. ಹಾಗಾಗಿ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ,

* ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು.

* ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ ಚಿಕಿತ್ಸೆಯನ್ನು ಉಚಿತ ನೀಡತಕ್ಕದ್ದು.

* ಈ ರೀತಿಯ ಪ್ರಕರಣಗಳು ಬಂದಾಗ ಸರ್ಕಾರಿ/ಖಾಸಗಿ ಆಸ್ಪತ್ರೆಗಳು ತಕ್ಷಣದ ವೈದ್ಯಕೀಯ ಸ್ಕ್ರೀನಿಂಗ್ ಸೇವೆಗಳು ಮತ್ತು ಪ್ರಥಮ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಸಮಯಪ್ರಜ್ಞೆಯಿಂದ ನಿರ್ವಹಿಸಬೇಕು. ಒಂದುವೇಳೆ, ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದ್ದಲ್ಲಿ ರೋಗಿಗೆ ಪ್ರಾಣಾಪಾಯವಾಗದಂತೆ  ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗೆ ರವಾನಿಸಬೇಕು.

* ನಾಯಿ/ಹಾವು ಕಡಿತದ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆಗಾಗಿ ಆಸ್ಪತ್ರೆ ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ. ಆದರೆ, ಆಸ್ಪತ್ರೆಗಳು SAST ಯೋಜನೆಯಡಿಯಲ್ಲಿ ನಿಗದಿಪಡಿಸಿರುವ ಮೊತ್ತ ಪಡೆದು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗುವುದು.

* ನಾಯಿ,ಹಾವು ಇತರೆ ಪ್ರಾಣಿಗಳ ಕಡಿತ ಪ್ರಕರಣಗಳಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವುಗಳಾದರೆ, ಸಂಬಂಧಿತ ವೈದ್ಯಾಧಿಕಾರಿ/ಸಂಸ್ಥೆಯ ಮುಖ್ಯಸ್ಥರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಥವಾ ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago