Categories: ಕೋಲಾರ

‘ನಾಲ್ಕು ತಿಂಗಳಲ್ಲಿ ಮೋದಿ ಸರಕಾರ ಪತನ: ರಾಹುಲ್ ಗಾಂಧಿಗೆ ಒಳ್ಳೆಯ ದಿನಗಳು ಬರಲಿದೆ’ – ಇಂಧನ ಸಚಿವ ಕೆ.ಜೆ ಜಾರ್ಜ್

ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿಕಲಿಸಿದ್ದಾರೆ ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಲ್ಲ ಜಾಸ್ತಿ ದಿನವು ಅಂತಹ ರಾಜಕಾರಣ ಉಳಿಯಲ್ಲ ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ಕಾರ್ಯಕರ್ತರಿಂದ ನಾವು ಎಲ್ಲರೂ ನಾಯಕರಾಗಿದ್ದೇವೆ ಇಲ್ಲಿಗೆ ಬಂದಿದ್ದೇನೆ ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿದೆ ಅಧಿಕಾರಕ್ಕಾಗಿ ಪಕ್ಷ ಅಲ್ಲ ಅನ್ನೋದು ತಿಳಿಯಬೇಕು ಜನರ ಹಿತಕ್ಕಾಗಿ ಪಕ್ಷವಾಗಬೇಕು ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ ಯುವ ಕಾಂಗ್ರೆಸ್ ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು ಅವರಿಗೆ ಅವಕಾಶಗಳು ಬಂದಿವೆ ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ತಮುಖ ಕಾರಣವಾಗಿ ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳ್ಮೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು,

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago