ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…