ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…