ಮನೆ ಬಳಿ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ ಕಚ್ಚಿ, ಬೆನ್ನಿನ ಮೇಲೆ ಎರಗಿ ಬಲವಾಗಿ ಪರಚಿ ಗಾಯ ಮಾಡಿರುವ ಘಟನೆ ನಗರದ ಗಾಣಿಗರಪೇಟೆಯ ವಾಸವಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಸಂಜೆ ನಡೆದಿದೆ.
ನಗರದ ಗಾಣಿಗರಪೇಟೆಯ ನಿವಾಸಿ ರಾಜೀವ್ ರವರ ನಾಲ್ಕು ವರ್ಷದ ಮಗಳಾದ ಸ್ವೀಕೃತಿ ಮೇಲೆ ಬೀದಿ ನಾಯಿ ದಾಳಿ ಮಾಡಿದೆ.
ಮಗುವಿನ ಮೇಲೆ ನಾಯಿ ದಾಳಿ ಮಾಡುತ್ತಿರುವುದನ್ನ ನೋಡಿದ ಅಕ್ಕಪಕ್ಕದ ಮನೆಯವರು, ಕೂಡಲೇ ನಾಯಿ ದಾಳಿಯಿಂದ ಪಾರು ಮಾಡುವಷ್ಟರಲ್ಲಿ ಕುತ್ತಿಗೆಗೆ ಬಾಯಿ ಹಾಕಿಯೇ ಬಿಟ್ಟಿತ್ತು. ನಾಯಿ ಕಡಿತಕ್ಕೆ ತೀವ್ರ ರಕ್ತ ಬಂದಿದೆ. ಕೂಡಲೇ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿಸಲಾಯಿತು. ಸದ್ಯ ಅದೃಷ್ಟವಶಾತ್ ನಾಯಿ ದಾಳಿಯಿಂದ ಪಾರಾಗಿರುವ ಮಗು.
ಮಗಳ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಬಗ್ಗೆ ಮಾತನಾಡಿದ ರಾಜೀವ್, ಒಂದು ವೇಳೆ ನಾಯಿ ಕುತ್ತಿಗೆ ಮುಂಭಾಗಕ್ಕೆ ಬಾಯಾಕಿದ್ದರೆ ಮಗಳ ಸ್ಥಿತಿ ಉಹಿಸಲೇ ಅಸಾಧ್ಯವಾಗಿತ್ತು ಎಂದು ಹೇಳಿದರು.
ನಗರಸಭೆಯ ನಿರ್ಲಕ್ಷ್ಯತೆಗೆ ಅಕ್ರೋಶಗೊಂಡಿರುವ ಸ್ಥಳೀಯರಾದ ರಮೇಶ್ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ಸಹ ನೀಡಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…